Choose Language:

B N Mallesh

ಲೇಖಕ ಬಿ.ಎನ್. ಮಲ್ಲೇಶ್ ವೃತ್ತಿಯಿಂದ ಪತ್ರಕರ್ತರು. ಎಂ.ಎ. ಎಲ್.ಎಲ್.ಬಿ ಪದವೀಧರರಾಗಿರುವ ಅವರು ದಾವಣಗೆರೆ ನಗರವಾಣಿ ದಿನಪತ್ರಿಕೆಯ ಸಹ ಸಂಪಾದಕರಾಗಿ, ಉದಯ ಟಿವಿಯ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ.
‘ಬ್ರೇಕಿಂಗ್ ನ್ಯೂಸ್’, ‘ತೆಪರೇಸಿ ರಿಟರ್ನ್ಸ್’, ‘ಬೇರು ಒಣಗಿದೆ ಪ್ರೀತಿ’ ಮತ್ತು ‘ಟ್ರ್ಯಾಕುಗಳ ಮೇಲೆ ಹುಣ್ಣಿಮೆ’ ಅವರ ಪ್ರಕಟಿತ ಕೃತಿಗಳು.
ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದ ಸೇವೆಗಾಗಿ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಗುಲಬರ್ಗಾದ ಅಮ್ಮ ಪ್ರಶಸ್ತಿ, ದಾವಣಗೆರೆಯಲ್ಲಿ ಮಹಾಲಿಂಗರಂಗ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo