Choose Language:

K Puttaswamy

ಪತ್ರಕರ್ತ, ಲೇಖಕ ಕೆ. ಪುಟ್ಟಸ್ವಾಮಿ ಕನಕಪುರ ಕೆ.ಜಿ.ಎಫ್ ಮುಂತಾದೆಡೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಪಡೆದಿದ್ದಾರೆ. ಜೊತೆಗೆ ಮೈಸೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಡಿಪ್ಲಮಾ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಡಿಲಿಟ್ ಪದವಿ ಪಡೆದಿದ್ದಾರೆ. ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿದ ಅವರು ಕರ್ನಾಟಕ ಸರಕಾರದ ವಾರ್ತಾ ಇಲಾಖೆ, ಅರಣ್ಯ, ಜೀವ ಪರಿಸರ, ಹಿಂದುಳಿದ ವರ್ಗಗಳ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂತಾದೆಡೆ ಹಲವು ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದಾರೆ.
ಜೀವ ಸಂಕುಲಗಳ ಉಗಮ, ಜೀವಜಾಲ, ಸಿನಿಮಾಯಾನ ಮುಂತಾದವು ಮುಖ್ಯ ಕೃತಿಗಳು. ಮಣಿ ಭೂಮಿಕ್, ಸಹಸ್ರಬುದ್ಧೆ, ಭೀರೇಂದ್ರ ಭಟ್ಟಾಚಾರ್ಯ, ಎಚ್.ಜಿ.ವೇಲ್ಸ್, ಜೂಲ್ಸ್ ವರ್ನ್ ಮತ್ತು ಲ್ಯ್ ವ್ಯಾಲೆಸ್ ಮುಂತಾದವರ ಕೃತಿಗಳನ್ನು ಅನುವಾದಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಪರಿಸರ ಪ್ರಶಸ್ತಿ, ರಾಷ್ಟ್ರಪತಿಗಳು ಕೊಡಮಾಡುವ ಸ್ವರ್ಣ ಕಮಲ ಮುಂತಾದ ಪ್ರಶಸ್ತಿಗಳು ಸಂದಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo