Choose Language:

Smitha Amrithraj

ಲೇಖಕಿ ಸ್ಮಿತಾ ಅಮೃತರಾಜ್, ಸಂಪಾಜೆ, ಗೃಹಿಣಿ ಮತ್ತು ಕೃಷಿಕ ಮಹಿಳೆ. ಕನ್ನಡ ಎಂ. ಎ.ಪದವೀಧರೆಯಾಗಿರುವ ಅವರು ಲಲಿತ ಪ್ರಬಂಧ, ಕವನ ಸಂಕಲನ, ಪುಸ್ತಕ ಪರಿಚಯ ಸೇರಿದಂತೆ ಒಟ್ಟು ಏಳು ಕೃತಿಗಳನ್ನು ಪ್ರಕಟಿಸಿದ್ದಾರೆ.
‘ಕಾಲ ಕಾಯುವುದಿಲ್ಲ’, ‘ತುಟಿಯಂಚಿನಲ್ಲಿ ಉಲಿದ ಕವಿತೆಗಳು’, ‘ಮಾತು ಮೀಟಿ ಹೋಗುವ ಹೊತ್ತು’ ಅವರ ಕವನ ಸಂಕಲನಗಳು. ‘ಅಂಗಳದಂಚಿನ ಕನವರಿಕೆಗಳು’, ‘ಒಂದು ವಿಳಾಸದ ಹಿಂದೆ’, ‘ನೆಲದಾಯ ಪರಿಮಳ’ ಮೂರು ಲಲಿತ ಪ್ರಬಂಧಗಳು. ಇವರ ಕೆಲ ಕವಿತೆಗಳು ಇಂಗ್ಲಿಷ್ ಮತ್ತು ಮಲಯಾಳಂಗೆ ಅನುವಾದಗೊಂಡಿದೆ. ಒಂದು ಪ್ರಬಂಧ, ಕವಿತೆ, ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಯ ಮಕ್ಕಳಿಗೆ ಪಠ್ಯವಾಗಿದೆ.
ಸಾಹಿತ್ಯ ಕ್ಷೇತ್ರದ ಸೇವೆಗಾಗಿ ಮುಂಬೈಯ ಸುಶೀಲಾ ಸೀತಾರಾಮ ಶೆಟ್ಟಿ ಪ್ರಶಸ್ತಿ, ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ, ಕೊಡಗಿನ ಗೌರಮ್ಮ ಪ್ರಶಸ್ತಿ, ಬಿ.ಎಂ.ಕಾವ್ಯ ಪ್ರಶಸ್ತಿ, ಸಾಹಿತ್ಯ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಸಂದಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo